ರಾಜ್ಯ

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಅಧಿವೇಶನದಲ್ಲಿ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭಾ ಅಧಿವೇಶನದಲ್ಲಿ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ‌ ಸಕ್ರಿಯರಾಗಿದ್ದರು.‌

ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿತ್ತು, ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ, ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

ಈಗ ಅವರ ಅಗಲಿಕೆ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago