ಶಿವಮೊಗ್ಗ: ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಶನಿವಾರ ಎಸ್ಐಟಿ ಅಧಿಕಾರಿಗಳಿಗೆ ಶರಣಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರೇವಣ್ಣ ಪ್ರಕರಣದಲ್ಲಿ ಕಾನೂನಿನ ಪ್ರಕಾರ ಎಲ್ಲಾ ಕ್ರಮಗಳು ಜರುಗಲಿವೆ. ಕಾನೂನಿಗಿಂತ ದೊಡ್ಡವರು ಯಾರಿಲ್ಲ ಎಂದಿದ್ದಾರೆ.
ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್ಐಟಿ ತಂಡಕ್ಕೆ ಶರಣಾಗಿದ್ದಾರೆ. ಈ ನೆಲದಲ್ಲಿ ಕಾನೂನು ಅಂತಿಮ. ಕಾನೂನಿನ ಪ್ರಕಾರ ಮುಂದಿನ ಕ್ರಮ ನಡೆಯಲಿದೆ ಎಂದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಇಳಿ ವಯಸ್ಸಿನಲ್ಲಿ ಇಂತಹ ವಿದ್ಯಮಾನ ನೋಡಿ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ದೇವೇಗೌಡರು ಈ ಬಗ್ಗೆ ಯೋಚಿಸದೆ. ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…