Mysore
24
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಇಸ್ರೊ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್‌ ನಿಧನ

ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್‌ ಶುಕ್ರವಾರ ನಿಧನರಾಗಿದ್ದಾರೆ.

ಕೆ.ಕಸ್ತೂರಿ ರಂಗನ್‌ ಅವರು ಇಂದು ಬೆಳಿಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿಗಳು ತಿಳಿಸಿದರು.

ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದೇ ಕರೆಯಲ್ಪಡುತ್ತಾರೆ.

Tags:
error: Content is protected !!