Mysore
23
overcast clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರಿಗೆ ಬಿಗ್‌ಶಾಕ್‌ ನೀಡಿದ್ದಾರೆ.

ಈಗಾಗಲೇ ಸಿ.ಪಿ.ಯೋಗೇಶ್ವರ್‌ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ವಾಟ್ಸಾಪ್‌ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಕೈ ಬರಹದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿಪಿವೈ ಕಾಣಿಸಿಕೊಂಡಿದ್ದು, ಬಳಿಕ ಡಿಕೆಶಿ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಸಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ.

ಬಳಿಕ ಮಧ್ಯಾಹ್ನದ ವೇಳೆಗೆ ಸಿ.ಪಿ.ಯೋಗೇಶ್ವರ್‌ ಅವರು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಮೈತ್ರಿ ನಾಯಕರಿಗೆ ಟಕ್ಕರ್‌ ಕೊಡಲು ಮುಂದಾಗಿದ್ದಾರೆ.

 

 

 

 

Tags:
error: Content is protected !!