ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಬಿಗ್ಶಾಕ್ ನೀಡಿದ್ದಾರೆ.
ಈಗಾಗಲೇ ಸಿ.ಪಿ.ಯೋಗೇಶ್ವರ್ ಅವರು, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ವಾಟ್ಸಾಪ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಕೈ ಬರಹದ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಸಿಪಿವೈ ಕಾಣಿಸಿಕೊಂಡಿದ್ದು, ಬಳಿಕ ಡಿಕೆಶಿ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಸಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ.
ಬಳಿಕ ಮಧ್ಯಾಹ್ನದ ವೇಳೆಗೆ ಸಿ.ಪಿ.ಯೋಗೇಶ್ವರ್ ಅವರು ಅಧಿಕೃತವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೈತ್ರಿ ನಾಯಕರಿಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…