ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ ಸಿ.ಪಿ.ಯೋಗೇಶ್ವರ್ ಪರ ವಕೀಲರಿಗೆ ಲಿಖಿತ ಉತ್ತರ ನೀಡಲು ಸೂಚಿಸಿದೆ. ಬಳಿಕ ಸಿ.ಪಿ.ಯೋಗೇಶ್ವರ್ ಅವರು ಲಿಖಿತ ದಾಖಲೆಯ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ?
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಮೊದಲ ಪತ್ನಿ ಮಂಜುಳಾ ಹಾಗೂ ಪುತ್ರ ಶ್ರವಣ್ ಎರಡೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿ ಮಾಡಿದ್ದು, ಆ ಮನೆ ಇಬ್ಬರ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಳಿಕ ಆ ಮನೆಯನ್ನು ಪುತ್ರಿ ನಿಶಾ ಯೋಗೇಶ್ವರ್ಗೆ ಉಡುಗೊರೆಯಾಗಿ ನೀಡಿದ್ದರು. ಇದಾದ ಮೇಲೆ 2024ರ ಅಕ್ಟೋಬರ್ನಲ್ಲಿ ನಮ್ಮ ತಂದೆಯ ಪಿಎ ಮೂಲಕ ಒಂದು ಡ್ರಾಫ್ಟ್ ಬಂದಿದ್ದು, ಆ ಡ್ರಾಫ್ಟ್ಗೆ ನನ್ನ ಅನುಮತಿ ಇಲ್ಲದೆ ನಕಲಿ ಸಹಿ ಹಾಕಿ ಆ ಮನೆಯ ಬಗ್ಗೆ ಪಾಲು ಕೇಳಿರುವಂತೆ ಕೇಸ್ ದಾಖಲಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಈ ದೂರಿನ್ವಯ ನಾನು ಕೋರ್ಟ್ ಮೊರೆ ಹೋಗಿದ್ದು, ನಾನು ಯಾವುದೇ ಸಹಿ ಮಾಡಿಲ್ಲ. ನಾನು ಆ ಮನೆಯಲ್ಲಿ ಯಾವುದೇ ಭಾಗವನ್ನು ಕೇಳಿಲ್ಲ ಎಂದು ಶ್ರವಣ್ ಸ್ಪಷ್ಟಪಡಿಸಿದ್ದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…