ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ ಸಿ.ಪಿ.ಯೋಗೇಶ್ವರ್ ಪರ ವಕೀಲರಿಗೆ ಲಿಖಿತ ಉತ್ತರ ನೀಡಲು ಸೂಚಿಸಿದೆ. ಬಳಿಕ ಸಿ.ಪಿ.ಯೋಗೇಶ್ವರ್ ಅವರು ಲಿಖಿತ ದಾಖಲೆಯ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ?
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಮೊದಲ ಪತ್ನಿ ಮಂಜುಳಾ ಹಾಗೂ ಪುತ್ರ ಶ್ರವಣ್ ಎರಡೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿ ಮಾಡಿದ್ದು, ಆ ಮನೆ ಇಬ್ಬರ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಳಿಕ ಆ ಮನೆಯನ್ನು ಪುತ್ರಿ ನಿಶಾ ಯೋಗೇಶ್ವರ್ಗೆ ಉಡುಗೊರೆಯಾಗಿ ನೀಡಿದ್ದರು. ಇದಾದ ಮೇಲೆ 2024ರ ಅಕ್ಟೋಬರ್ನಲ್ಲಿ ನಮ್ಮ ತಂದೆಯ ಪಿಎ ಮೂಲಕ ಒಂದು ಡ್ರಾಫ್ಟ್ ಬಂದಿದ್ದು, ಆ ಡ್ರಾಫ್ಟ್ಗೆ ನನ್ನ ಅನುಮತಿ ಇಲ್ಲದೆ ನಕಲಿ ಸಹಿ ಹಾಕಿ ಆ ಮನೆಯ ಬಗ್ಗೆ ಪಾಲು ಕೇಳಿರುವಂತೆ ಕೇಸ್ ದಾಖಲಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಈ ದೂರಿನ್ವಯ ನಾನು ಕೋರ್ಟ್ ಮೊರೆ ಹೋಗಿದ್ದು, ನಾನು ಯಾವುದೇ ಸಹಿ ಮಾಡಿಲ್ಲ. ನಾನು ಆ ಮನೆಯಲ್ಲಿ ಯಾವುದೇ ಭಾಗವನ್ನು ಕೇಳಿಲ್ಲ ಎಂದು ಶ್ರವಣ್ ಸ್ಪಷ್ಟಪಡಿಸಿದ್ದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…