Categories: ರಾಜ್ಯ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ವಿರುದ್ಧ ಪುತ್ರ ಶ್ರವಣ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ವಿರುದ್ಧ ಪುತ್ರ ಶ್ರವಣ್‌ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್‌ ಸಲ್ಲಿಸುವಂತೆ ಆದೇಶ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್‌ ಕೋರ್ಟ್‌ ಸಿ.ಪಿ.ಯೋಗೇಶ್ವರ್‌ ಪರ ವಕೀಲರಿಗೆ ಲಿಖಿತ ಉತ್ತರ ನೀಡಲು ಸೂಚಿಸಿದೆ. ಬಳಿಕ ಸಿ.ಪಿ.ಯೋಗೇಶ್ವರ್‌ ಅವರು ಲಿಖಿತ ದಾಖಲೆಯ ಆಫಿಡವಿಟ್‌ ಸಲ್ಲಿಸುವಂತೆ ಆದೇಶ ನೀಡಿದೆ.

ಏನಿದು ಪ್ರಕರಣ?
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರ ಮೊದಲ ಪತ್ನಿ ಮಂಜುಳಾ ಹಾಗೂ ಪುತ್ರ ಶ್ರವಣ್‌ ಎರಡೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿ ಮಾಡಿದ್ದು, ಆ ಮನೆ ಇಬ್ಬರ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಳಿಕ ಆ ಮನೆಯನ್ನು ಪುತ್ರಿ ನಿಶಾ ಯೋಗೇಶ್ವರ್‌ಗೆ ಉಡುಗೊರೆಯಾಗಿ ನೀಡಿದ್ದರು. ಇದಾದ ಮೇಲೆ 2024ರ ಅಕ್ಟೋಬರ್‌ನಲ್ಲಿ ನಮ್ಮ ತಂದೆಯ ಪಿಎ ಮೂಲಕ ಒಂದು ಡ್ರಾಫ್ಟ್‌ ಬಂದಿದ್ದು, ಆ ಡ್ರಾಫ್ಟ್‌ಗೆ ನನ್ನ ಅನುಮತಿ ಇಲ್ಲದೆ ನಕಲಿ ಸಹಿ ಹಾಕಿ ಆ ಮನೆಯ ಬಗ್ಗೆ ಪಾಲು ಕೇಳಿರುವಂತೆ ಕೇಸ್‌ ದಾಖಲಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ದೂರಿನ್ವಯ ನಾನು ಕೋರ್ಟ್‌ ಮೊರೆ ಹೋಗಿದ್ದು, ನಾನು ಯಾವುದೇ ಸಹಿ ಮಾಡಿಲ್ಲ. ನಾನು ಆ ಮನೆಯಲ್ಲಿ ಯಾವುದೇ ಭಾಗವನ್ನು ಕೇಳಿಲ್ಲ ಎಂದು ಶ್ರವಣ್‌ ಸ್ಪಷ್ಟಪಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

1 hour ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

2 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

2 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

2 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

2 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

2 hours ago