ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಪುತ್ರ ಶ್ರವಣ್ ನಕಲಿ ಸಹಿ ಮಾಡಿರುವುದಾಗಿ ಆರೋಪಿಸಿ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದು ಲಿಖಿತ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ 19ನೇ ಸೇಷನ್ಸ್ ಕೋರ್ಟ್ ಸಿ.ಪಿ.ಯೋಗೇಶ್ವರ್ ಪರ ವಕೀಲರಿಗೆ ಲಿಖಿತ ಉತ್ತರ ನೀಡಲು ಸೂಚಿಸಿದೆ. ಬಳಿಕ ಸಿ.ಪಿ.ಯೋಗೇಶ್ವರ್ ಅವರು ಲಿಖಿತ ದಾಖಲೆಯ ಆಫಿಡವಿಟ್ ಸಲ್ಲಿಸುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ?
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಮೊದಲ ಪತ್ನಿ ಮಂಜುಳಾ ಹಾಗೂ ಪುತ್ರ ಶ್ರವಣ್ ಎರಡೂವರೆ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮನೆ ಖರೀದಿ ಮಾಡಿದ್ದು, ಆ ಮನೆ ಇಬ್ಬರ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಳಿಕ ಆ ಮನೆಯನ್ನು ಪುತ್ರಿ ನಿಶಾ ಯೋಗೇಶ್ವರ್ಗೆ ಉಡುಗೊರೆಯಾಗಿ ನೀಡಿದ್ದರು. ಇದಾದ ಮೇಲೆ 2024ರ ಅಕ್ಟೋಬರ್ನಲ್ಲಿ ನಮ್ಮ ತಂದೆಯ ಪಿಎ ಮೂಲಕ ಒಂದು ಡ್ರಾಫ್ಟ್ ಬಂದಿದ್ದು, ಆ ಡ್ರಾಫ್ಟ್ಗೆ ನನ್ನ ಅನುಮತಿ ಇಲ್ಲದೆ ನಕಲಿ ಸಹಿ ಹಾಕಿ ಆ ಮನೆಯ ಬಗ್ಗೆ ಪಾಲು ಕೇಳಿರುವಂತೆ ಕೇಸ್ ದಾಖಲಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಈ ದೂರಿನ್ವಯ ನಾನು ಕೋರ್ಟ್ ಮೊರೆ ಹೋಗಿದ್ದು, ನಾನು ಯಾವುದೇ ಸಹಿ ಮಾಡಿಲ್ಲ. ನಾನು ಆ ಮನೆಯಲ್ಲಿ ಯಾವುದೇ ಭಾಗವನ್ನು ಕೇಳಿಲ್ಲ ಎಂದು ಶ್ರವಣ್ ಸ್ಪಷ್ಟಪಡಿಸಿದ್ದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…