ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ ಪತ್ನಿ ಮಂಜುಳಾರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವನೆಯ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿದ ಕಾರಣ ಇಂದು ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನುಬಂಧಿಸಿ ೧೧ ದಿನಗಳ ಕಾಲ ತನಿಖೆ ನಡೆಸಿದ್ದರು. ನಾಗೇಂದ್ರ ಅವರನ್ನ ಆರಂಭದಲ್ಲಿ ೬ ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನ ೨ನೇ ಬಾರಿಗೆ ೫ ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…