ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ ಪತ್ನಿ ಮಂಜುಳಾರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವನೆಯ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿದ ಕಾರಣ ಇಂದು ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನುಬಂಧಿಸಿ ೧೧ ದಿನಗಳ ಕಾಲ ತನಿಖೆ ನಡೆಸಿದ್ದರು. ನಾಗೇಂದ್ರ ಅವರನ್ನ ಆರಂಭದಲ್ಲಿ ೬ ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನ ೨ನೇ ಬಾರಿಗೆ ೫ ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…