ರಾಜ್ಯ

ವಾಲ್ಮೀಕಿ ಹಗರಣ ; ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ.

ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ ಪತ್ನಿ ಮಂಜುಳಾರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವನೆಯ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿದ ಕಾರಣ ಇಂದು ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನುಬಂಧಿಸಿ ೧೧ ದಿನಗಳ ಕಾಲ ತನಿಖೆ ನಡೆಸಿದ್ದರು. ನಾಗೇಂದ್ರ ಅವರನ್ನ ಆರಂಭದಲ್ಲಿ ೬ ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನ ೨ನೇ ಬಾರಿಗೆ ೫ ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago