ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಇಂದು ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.
ಇನ್ನು ನಾಗೇಂದ್ರ ಅವರು ಇಡಿ ಕಸ್ಟಡಿಯಲ್ಲಿರುವಾಗಲೇ ಅವರ ಪತ್ನಿ ಮಂಜುಳಾರನ್ನು ಸಹ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿ ಅಕ್ರಮದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರೋಪಿಗಳು ಚುನಾವನೆಯ ವೇಳೆ ಎಣ್ಣೆಗೆ ಹಣ ಬಳಸಿರುವ ಬಗ್ಗೆ ಮಾಹಿತಿ ನೀಡಿದ್ದರು. ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳ ಪ್ರಶ್ನೆಗೆ ನಾಗೇಂದ್ರ ಸರಿಯಾಗಿ ಉತ್ತರಿಸಿದ ಕಾರಣ ಇಂದು ಮತ್ತೊಮ್ಮೆ ಇಡಿ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ಅವರನ್ನುಬಂಧಿಸಿ ೧೧ ದಿನಗಳ ಕಾಲ ತನಿಖೆ ನಡೆಸಿದ್ದರು. ನಾಗೇಂದ್ರ ಅವರನ್ನ ಆರಂಭದಲ್ಲಿ ೬ ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನ ೨ನೇ ಬಾರಿಗೆ ೫ ದಿನ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…