ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್ ಮಾಡಲು ಸಂಚು ಮಾಡಲಾಗಿತ್ತು.
ಈ ಮೂಲಕ ಹೋರಾಟ ನಿಲ್ಲಿಸಲು ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮುಗಿಸಲು ಪ್ಲ್ಯಾನ್ ನಡೆದಿತ್ತು ಎಂದು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಿದ್ರೆ ಹೋರಾಟ ನಿಲ್ಲುತ್ತೆ ಎಂದು ಗೋಲಿ ಬಾರ್ ಮಾಡಲು ಪ್ಲ್ಯಾನ್ ನಡೆದಿತ್ತು.
ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್ನ್ನು ನಾವೆಲ್ಲಾ ಖಂಡಿಸಬೇಕು. ಇಲ್ಲವಾದರೆ ನಮಗೂ ಕೂಡ ಉಳಿಗಾಲವಿಲ್ಲ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತ್ತಿದ್ದಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್ ಮಾಡುವ ಬದಲು ಮುತ್ತು ಕೊಡಬೇಕಾ ಎಂದು ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರೆ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನು ಕೇಳಬೇಕಿತ್ತು ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ವ್ಯಾಮೋಹ ಜಾಸ್ತಿಯಾಗಿದೆ. ಕಾವಿ ಬಟ್ಟೆ ಹಾಕಿಕೊಂಡವರ ಮೇಲೆ ಅವರಿಗೆ ಅಷ್ಟ್ಯಾಕೆ ಸಿಟ್ಟು ಎಂದು ಪ್ರಶ್ನೆ ಮಾಡಿದರು.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…
ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್ಗಾರ್ ಮತ್ತು ಅಜೀವಿಕಾ…
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…