ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್ ಮಾಡಲು ಸಂಚು ಮಾಡಲಾಗಿತ್ತು.
ಈ ಮೂಲಕ ಹೋರಾಟ ನಿಲ್ಲಿಸಲು ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮುಗಿಸಲು ಪ್ಲ್ಯಾನ್ ನಡೆದಿತ್ತು ಎಂದು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಿದ್ರೆ ಹೋರಾಟ ನಿಲ್ಲುತ್ತೆ ಎಂದು ಗೋಲಿ ಬಾರ್ ಮಾಡಲು ಪ್ಲ್ಯಾನ್ ನಡೆದಿತ್ತು.
ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್ನ್ನು ನಾವೆಲ್ಲಾ ಖಂಡಿಸಬೇಕು. ಇಲ್ಲವಾದರೆ ನಮಗೂ ಕೂಡ ಉಳಿಗಾಲವಿಲ್ಲ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತ್ತಿದ್ದಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್ ಮಾಡುವ ಬದಲು ಮುತ್ತು ಕೊಡಬೇಕಾ ಎಂದು ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರೆ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನು ಕೇಳಬೇಕಿತ್ತು ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ವ್ಯಾಮೋಹ ಜಾಸ್ತಿಯಾಗಿದೆ. ಕಾವಿ ಬಟ್ಟೆ ಹಾಕಿಕೊಂಡವರ ಮೇಲೆ ಅವರಿಗೆ ಅಷ್ಟ್ಯಾಕೆ ಸಿಟ್ಟು ಎಂದು ಪ್ರಶ್ನೆ ಮಾಡಿದರು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…