ರಾಜ್ಯ

ಪೊಲೀಸರ ವಿರುದ್ಧ ಹೊಸ ಬಾಂಬ್‌ ಸಿಡಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ: ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪೊಲೀಸರು ಸಂಚು ರೂಪಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಗೋಲಿ ಬಾರ್‌ ಮಾಡಲು ಸಂಚು ಮಾಡಲಾಗಿತ್ತು.

ಈ ಮೂಲಕ ಹೋರಾಟ ನಿಲ್ಲಿಸಲು ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮುಗಿಸಲು ಪ್ಲ್ಯಾನ್‌ ನಡೆದಿತ್ತು ಎಂದು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.

ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಿದ್ರೆ ಹೋರಾಟ ನಿಲ್ಲುತ್ತೆ ಎಂದು ಗೋಲಿ ಬಾರ್‌ ಮಾಡಲು ಪ್ಲ್ಯಾನ್‌ ನಡೆದಿತ್ತು.

ಚನ್ನಮ್ಮ ವಂಶಸ್ಥರ ಮೇಲೆ ನಡೆದ ಲಾಠಿ ಚಾರ್ಜ್‌ನ್ನು ನಾವೆಲ್ಲಾ ಖಂಡಿಸಬೇಕು. ಇಲ್ಲವಾದರೆ ನಮಗೂ ಕೂಡ ಉಳಿಗಾಲವಿಲ್ಲ. ನಾವು ಪಂಚಮಸಾಲಿ ಸಮುದಾಯದ ಜೊತೆ ಗಟ್ಟಿಯಾಗಿದ್ದೇವೆ. ಸಮುದಾಯದವರ ಮೇಲಿನ ದಾಳಿಯನ್ನು ಎಲ್ಲಾ ಮಠಾಧೀಶರು ಖಂಡಿಸಬೇಕು. ಮೀಸಲಾತಿ ಅವರ ಹಕ್ಕು, ಅದನ್ನು ಅವರು ಕೇಳುತ್ತಿದ್ದಾರೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಲಾಠಿ ಚಾರ್ಜ್‌ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರು ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಲಾಠಿ ಚಾರ್ಜ್‌ ಮಾಡುವ ಬದಲು ಮುತ್ತು ಕೊಡಬೇಕಾ ಎಂದು ಕೇಳ್ತಾರೆ. ಮುತ್ತು ಕೊಡು ಎಂದು ಕೇಳಿದ್ದಾರೆ? ಹೋರಾಟಗಾರರು ಇರುವಲ್ಲಿಗೆ ಹೋಗಿ ಅವರ ಮನವಿಯನ್ನು ಕೇಳಬೇಕಿತ್ತು ಎಂದು ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮುಸ್ಲಿಂ ಸಮುದಾಯದ ಮೇಲೆ ವ್ಯಾಮೋಹ ಜಾಸ್ತಿಯಾಗಿದೆ. ಕಾವಿ ಬಟ್ಟೆ ಹಾಕಿಕೊಂಡವರ ಮೇಲೆ ಅವರಿಗೆ ಅಷ್ಟ್ಯಾಕೆ ಸಿಟ್ಟು ಎಂದು ಪ್ರಶ್ನೆ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

2 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

3 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

4 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

4 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

6 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

7 hours ago