ರಾಜ್ಯ

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್ ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಮತ್ತೆ ಜಾತಿ ಗಣತಿಯ ಹೆಲ್ಮೆಟ್ ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಂಮರು ಅತಿದೊಡ್ಡ ಜನ ಸಮುದಾಯ. ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ ಎಂದು ವಾಗ್ದಾ ನಡೆಸಿದ್ದಾರೆ.

ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ ಮನೆಗೆ ಮಗನಲ್ಲ ಎಂಬಂತಾಗುತ್ತದೆಯಷ್ಟೇ ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

3 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

4 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

4 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

4 hours ago