ರಾಜ್ಯ

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್ ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಮತ್ತೆ ಜಾತಿ ಗಣತಿಯ ಹೆಲ್ಮೆಟ್ ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಂಮರು ಅತಿದೊಡ್ಡ ಜನ ಸಮುದಾಯ. ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ ಎಂದು ವಾಗ್ದಾ ನಡೆಸಿದ್ದಾರೆ.

ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ ಮನೆಗೆ ಮಗನಲ್ಲ ಎಂಬಂತಾಗುತ್ತದೆಯಷ್ಟೇ ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

4 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

22 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

41 mins ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

4 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

4 hours ago