ರಾಜ್ಯ

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್ ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಮತ್ತೆ ಜಾತಿ ಗಣತಿಯ ಹೆಲ್ಮೆಟ್ ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಂಮರು ಅತಿದೊಡ್ಡ ಜನ ಸಮುದಾಯ. ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ ಎಂದು ವಾಗ್ದಾ ನಡೆಸಿದ್ದಾರೆ.

ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ ಮನೆಗೆ ಮಗನಲ್ಲ ಎಂಬಂತಾಗುತ್ತದೆಯಷ್ಟೇ ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago