ರಾಜ್ಯ

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್ ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಮತ್ತೆ ಜಾತಿ ಗಣತಿಯ ಹೆಲ್ಮೆಟ್ ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಂಮರು ಅತಿದೊಡ್ಡ ಜನ ಸಮುದಾಯ. ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ ಎಂದು ವಾಗ್ದಾ ನಡೆಸಿದ್ದಾರೆ.

ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ ಮನೆಗೆ ಮಗನಲ್ಲ ಎಂಬಂತಾಗುತ್ತದೆಯಷ್ಟೇ ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

8 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

8 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

8 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

8 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

8 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

8 hours ago