ರಾಜ್ಯ

ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ: ಮಾಜಿ ಸಚಿವ ವಿ.ಸುನೀಲ್‌ ಕುಮಾರ್‌

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಿದ್ದರಾಮಯ್ಯನವರಿಗಾಗಿ ಸಿದ್ದರಾಮಯ್ಯನವರಿಗೋಸ್ಕರ ಸಿದ್ದರಾಮಯ್ಯನವರೇ ಕೈ ಹಿಡಿದು ಬರೆಸಿದ್ದೇ ಈ ಜಾತಿ ಗಣತಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಕೆ, ನಾಯಕತ್ವ ಬದಲಾವಣೆ, ಹನಿ ಟ್ರ್ಯಾಪ್ ನಂಥ ವಿಚಾರಗಳು ತಮ್ಮ ಖುರ್ಚಿಗೆ ಧಕ್ಕೆ ತಂದಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಮತ್ತೆ ಜಾತಿ ಗಣತಿಯ ಹೆಲ್ಮೆಟ್ ಧರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಸಮೀಕ್ಷಾ ವರದಿಯ ಸೋರಿಕೆಯಾದ ಭಾಗಗಳ ಪ್ರಕಾರ ಮುಸ್ಲಿಂಮರು ಅತಿದೊಡ್ಡ ಜನ ಸಮುದಾಯ. ಹಿಂದುಗಳನ್ನು ಜಾತಿಯ ಹೆಸರಿನಲ್ಲಿ ಛಿದ್ರಗೊಳಿಸಿ ಮುಸ್ಲಿಮರನ್ನು ಪೋಷಿಸಿ ತಮ್ಮ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ನಡೆಸಿದ್ದಾರೆ. ಈಗಿನ ಲೆಕ್ಕಾಚಾರ ಗಮನಿಸಿದರೆ ಸಿದ್ದರಾಮಯ್ಯರಿಗೆ ಈ ಸಮೀಕ್ಷಾ ವರದಿ ಅನುಷ್ಠಾನಗೊಳಿಸುವ ಯಾವ ಬದ್ಧತೆಯೂ ಇದ್ದಂತಿಲ್ಲ ಎಂದು ವಾಗ್ದಾ ನಡೆಸಿದ್ದಾರೆ.

ಎಲ್ಲ ಸಮಾಜವನ್ನು ಸಂಖ್ಯಾಬಲ ಪ್ರದರ್ಶನಕ್ಕೆ ಬಿಟ್ಟಿರುವ ಸಿದ್ದರಾಮಯ್ಯ ಮೀಸಲಾತಿ ವಂಚಿತರು, ಮೀಸಲಾತಿಯನ್ನು ಅತಿಯಾಗಿ ಭಕ್ಷಿಸಿದ ಹಿಂದುಳಿದ ಜಾತಿಗಳು, ಮೀಸಲಾತಿ ಹೆಚ್ಚಳದ ಅನಿವಾರ್ಯತೆ ಇತ್ಯಾದಿ ವಿಚಾರಗಳ ಚರ್ಚೆ ಬೇಕಿಲ್ಲ ವಿಶೇಷ ಕ್ಯಾಬಿನೆಟ್, ಸಂಪುಟ ಉಪಸಮಿತಿ ಹೆಸರಿನಲ್ಲಿ ಒಂದಿಷ್ಟು ಕಾಲಹರಣ ನಡೆಸುವುದು ಸದ್ಯದ ಲೆಕ್ಕಾಚಾರ. ಹಿಂದುಳಿದ ವರ್ಗಗಳ ಛಾಂಪಿಯನ್ ಎಂದು ಸ್ವಯಂ ಘೋಷಿಸಿಕೊಂಡ ಸಿದ್ದರಾಮಯ್ಯನವರೇ ಈ ವರದಿಯಿಂದ ಹಿಂದುಳಿದ ವರ್ಗದವರಿಗೆ ಆಗುವ ಪ್ರಯೋಜನ ಏನೆಂಬುದರ ಬಗ್ಗೆ ಮೊದಲು ಚರ್ಚೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅದಕ್ಕಿಂತ ಹೆಚ್ಚಾಗಿ ಒಟ್ಟಾರೆ ಸಮಾಜದ ಮೇಲಿನ ಪರಿಣಾಮವೇನೆಂಬುದು ವಿಶ್ಲೇಷಣೆಗೆ ಒಳಪಡಬೇಕು. ವರದಿಯ ವೈಜ್ಞಾನಿಕತೆ ಹಾಗೂ ಪ್ರಸ್ತುತತೆಯ ಬಗ್ಗೆ ತುರ್ತು ಅಧ್ಯಯನಕ್ಕೆ ಉಭಯಸದನದ ಜಂಟಿ ಸದನ ಸಮಿತಿ ರಚನೆ ಮಾಡಿ. ಸುಮ್ಮನೆ ವರದಿ ಮಂಡಿಸಿ ಗಾಳಿಯಲ್ಲಿ ಗುಂಡು ಹೊಡೆದರೆ ಮನೆಗೆ ಮಗನಲ್ಲ ಎಂಬಂತಾಗುತ್ತದೆಯಷ್ಟೇ ಎಂದು ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

2 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

3 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

3 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

4 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

4 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

5 hours ago