ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ.
ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ ಕೊಡುವುದು ಹಾಗೂ ಯಾರಿಗೆ ಯಾವ್ಯಾವ ಪುಸ್ತಕ ಕೊಡಲಾಗಿದೆ ಎಂದು ನೋಂದಾಣಿ ಮಾಡಿಕೊಳ್ಳುವ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಒಂದು ದಿನ ಜೈಲಿನ ಲೈಬ್ರರಿಯಲ್ಲಿ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡಿದ್ದಾರೆ. ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದಕ್ಕೆ ಪ್ರಜ್ವಲ್ ರೇವಣ್ಣಗೆ ದಿನಕ್ಕೆ 522 ರೂಪಾಯಿ ಕೂಲಿ ಕೂಡ ಸಿಕ್ಕಿದೆ. ಪ್ರತಿನಿತ್ಯ ನೊಂದಾಣಿ ಮಾಡಿ ಕೆಲಸ ಮಾಡಿದ್ರೆ ಮಾತ್ರ ಆ ದಿನದ ಸಂಬಳ ಬರುತ್ತೆ. ಟ್ರಯಲ್ ಗೆ ಕೋರ್ಟ್ ಗೆ ಹೋಗುವುದು ಸೇರಿ ಕೆಲಸಕ್ಕೆ ಹಾಜರಾಗದಿದ್ರೆ ಹಣ ನೀಡುವುದಿಲ್ಲ. ಪುಸ್ತಕಗಳನ್ನ ಕೊಟ್ಟು ಎಂಟ್ರಿ ಮಾಡಿಕೊಳ್ಳುವ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಟ್ರಯಲ್ ಕೋರ್ಟ್ ಗೆ ಹೋಗೋದು ಹಾಗೂ ವಕೀಲರ ಜೊತೆ ಚರ್ಚೆ ಕೆಲಸಗಳಲ್ಲಿ ಪ್ರಜ್ವಲ್ ರೇವಣ್ಣ ಬ್ಯುಸಿಯಾಗಿದ್ದಾರೆ. ಹೀಗಾಗಿ ಪೂರ್ತಿಯಾಗಿ ಜೈಲು ಲೈಬ್ರರಿ ಕ್ಲರ್ಕ್ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜಿಸಿಲ್ಲ.
ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು. ಖೈದಿಗಳ ಅರ್ಹತೆ, ಆಸಕ್ತಿಗೆ ಅನುಗುಣವಾಗಿ ಕೆಲಸ ಹಂಚಿಕೆ ಮಾಡಲಾಗುತ್ತೆ. ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಮಾಡುತ್ತೇನೆ, ಜೊತೆಗೆ ಜೈಲಿನ ಅಡ್ಮಿನಿಸ್ಟ್ರೇಟೀವ್ ಕೆಲಸ ಕೂಡ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದರು. ಆದರೇ, ಅಂತಿಮವಾಗಿ ಜೈಲು ಅಧಿಕಾರಿಗಳು ಲೈಬ್ರರಿ ಕ್ಲರ್ಕ್ ಕೆಲಸವನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದಾರೆ.
ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ನಡೆಸಿದ್ದಾರೆ.
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…