ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ.
ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ ಕೊಡುವುದು ಹಾಗೂ ಯಾರಿಗೆ ಯಾವ್ಯಾವ ಪುಸ್ತಕ ಕೊಡಲಾಗಿದೆ ಎಂದು ನೋಂದಾಣಿ ಮಾಡಿಕೊಳ್ಳುವ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಒಂದು ದಿನ ಜೈಲಿನ ಲೈಬ್ರರಿಯಲ್ಲಿ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡಿದ್ದಾರೆ. ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದಕ್ಕೆ ಪ್ರಜ್ವಲ್ ರೇವಣ್ಣಗೆ ದಿನಕ್ಕೆ 522 ರೂಪಾಯಿ ಕೂಲಿ ಕೂಡ ಸಿಕ್ಕಿದೆ. ಪ್ರತಿನಿತ್ಯ ನೊಂದಾಣಿ ಮಾಡಿ ಕೆಲಸ ಮಾಡಿದ್ರೆ ಮಾತ್ರ ಆ ದಿನದ ಸಂಬಳ ಬರುತ್ತೆ. ಟ್ರಯಲ್ ಗೆ ಕೋರ್ಟ್ ಗೆ ಹೋಗುವುದು ಸೇರಿ ಕೆಲಸಕ್ಕೆ ಹಾಜರಾಗದಿದ್ರೆ ಹಣ ನೀಡುವುದಿಲ್ಲ. ಪುಸ್ತಕಗಳನ್ನ ಕೊಟ್ಟು ಎಂಟ್ರಿ ಮಾಡಿಕೊಳ್ಳುವ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಟ್ರಯಲ್ ಕೋರ್ಟ್ ಗೆ ಹೋಗೋದು ಹಾಗೂ ವಕೀಲರ ಜೊತೆ ಚರ್ಚೆ ಕೆಲಸಗಳಲ್ಲಿ ಪ್ರಜ್ವಲ್ ರೇವಣ್ಣ ಬ್ಯುಸಿಯಾಗಿದ್ದಾರೆ. ಹೀಗಾಗಿ ಪೂರ್ತಿಯಾಗಿ ಜೈಲು ಲೈಬ್ರರಿ ಕ್ಲರ್ಕ್ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜಿಸಿಲ್ಲ.
ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು. ಖೈದಿಗಳ ಅರ್ಹತೆ, ಆಸಕ್ತಿಗೆ ಅನುಗುಣವಾಗಿ ಕೆಲಸ ಹಂಚಿಕೆ ಮಾಡಲಾಗುತ್ತೆ. ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಮಾಡುತ್ತೇನೆ, ಜೊತೆಗೆ ಜೈಲಿನ ಅಡ್ಮಿನಿಸ್ಟ್ರೇಟೀವ್ ಕೆಲಸ ಕೂಡ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದರು. ಆದರೇ, ಅಂತಿಮವಾಗಿ ಜೈಲು ಅಧಿಕಾರಿಗಳು ಲೈಬ್ರರಿ ಕ್ಲರ್ಕ್ ಕೆಲಸವನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದಾರೆ.
ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ನಡೆಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…