ರಾಜ್ಯ

ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ.

ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ ಕೊಡುವುದು ಹಾಗೂ ಯಾರಿಗೆ ಯಾವ್ಯಾವ ಪುಸ್ತಕ ಕೊಡಲಾಗಿದೆ ಎಂದು ನೋಂದಾಣಿ ಮಾಡಿಕೊಳ್ಳುವ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಒಂದು ದಿನ ಜೈಲಿನ ಲೈಬ್ರರಿಯಲ್ಲಿ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡಿದ್ದಾರೆ. ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದಕ್ಕೆ ಪ್ರಜ್ವಲ್ ರೇವಣ್ಣಗೆ ದಿನಕ್ಕೆ 522 ರೂಪಾಯಿ ಕೂಲಿ ಕೂಡ ಸಿಕ್ಕಿದೆ. ಪ್ರತಿನಿತ್ಯ ನೊಂದಾಣಿ ಮಾಡಿ ಕೆಲಸ ಮಾಡಿದ್ರೆ ಮಾತ್ರ ಆ ದಿನದ ಸಂಬಳ ಬರುತ್ತೆ. ಟ್ರಯಲ್ ಗೆ ಕೋರ್ಟ್ ಗೆ ಹೋಗುವುದು ಸೇರಿ ಕೆಲಸಕ್ಕೆ ಹಾಜರಾಗದಿದ್ರೆ ಹಣ ನೀಡುವುದಿಲ್ಲ. ಪುಸ್ತಕಗಳನ್ನ ಕೊಟ್ಟು ಎಂಟ್ರಿ ಮಾಡಿಕೊಳ್ಳುವ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಟ್ರಯಲ್ ಕೋರ್ಟ್ ಗೆ ಹೋಗೋದು ಹಾಗೂ ವಕೀಲರ ಜೊತೆ ಚರ್ಚೆ ಕೆಲಸಗಳಲ್ಲಿ ಪ್ರಜ್ವಲ್ ರೇವಣ್ಣ ಬ್ಯುಸಿಯಾಗಿದ್ದಾರೆ. ಹೀಗಾಗಿ ಪೂರ್ತಿಯಾಗಿ ಜೈಲು ಲೈಬ್ರರಿ ಕ್ಲರ್ಕ್ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜಿಸಿಲ್ಲ.

ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು. ಖೈದಿಗಳ ಅರ್ಹತೆ, ಆಸಕ್ತಿಗೆ ಅನುಗುಣವಾಗಿ ಕೆಲಸ ಹಂಚಿಕೆ ಮಾಡಲಾಗುತ್ತೆ. ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಮಾಡುತ್ತೇನೆ, ಜೊತೆಗೆ ಜೈಲಿನ ಅಡ್ಮಿನಿಸ್ಟ್ರೇಟೀವ್ ಕೆಲಸ ಕೂಡ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದರು. ಆದರೇ, ಅಂತಿಮವಾಗಿ ಜೈಲು ಅಧಿಕಾರಿಗಳು ಲೈಬ್ರರಿ ಕ್ಲರ್ಕ್ ಕೆಲಸವನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದಾರೆ.

ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago