ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ.
ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ ಕೊಡುವುದು ಹಾಗೂ ಯಾರಿಗೆ ಯಾವ್ಯಾವ ಪುಸ್ತಕ ಕೊಡಲಾಗಿದೆ ಎಂದು ನೋಂದಾಣಿ ಮಾಡಿಕೊಳ್ಳುವ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಒಂದು ದಿನ ಜೈಲಿನ ಲೈಬ್ರರಿಯಲ್ಲಿ ಕ್ಲರ್ಕ್ ಆಗಿ ಪ್ರಜ್ವಲ್ ರೇವಣ್ಣ ಕೆಲಸ ಮಾಡಿದ್ದಾರೆ. ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡಿದ್ದಕ್ಕೆ ಪ್ರಜ್ವಲ್ ರೇವಣ್ಣಗೆ ದಿನಕ್ಕೆ 522 ರೂಪಾಯಿ ಕೂಲಿ ಕೂಡ ಸಿಕ್ಕಿದೆ. ಪ್ರತಿನಿತ್ಯ ನೊಂದಾಣಿ ಮಾಡಿ ಕೆಲಸ ಮಾಡಿದ್ರೆ ಮಾತ್ರ ಆ ದಿನದ ಸಂಬಳ ಬರುತ್ತೆ. ಟ್ರಯಲ್ ಗೆ ಕೋರ್ಟ್ ಗೆ ಹೋಗುವುದು ಸೇರಿ ಕೆಲಸಕ್ಕೆ ಹಾಜರಾಗದಿದ್ರೆ ಹಣ ನೀಡುವುದಿಲ್ಲ. ಪುಸ್ತಕಗಳನ್ನ ಕೊಟ್ಟು ಎಂಟ್ರಿ ಮಾಡಿಕೊಳ್ಳುವ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜನೆ ಮಾಡಲಾಗಿದೆ. ಸದ್ಯ ಟ್ರಯಲ್ ಕೋರ್ಟ್ ಗೆ ಹೋಗೋದು ಹಾಗೂ ವಕೀಲರ ಜೊತೆ ಚರ್ಚೆ ಕೆಲಸಗಳಲ್ಲಿ ಪ್ರಜ್ವಲ್ ರೇವಣ್ಣ ಬ್ಯುಸಿಯಾಗಿದ್ದಾರೆ. ಹೀಗಾಗಿ ಪೂರ್ತಿಯಾಗಿ ಜೈಲು ಲೈಬ್ರರಿ ಕ್ಲರ್ಕ್ ಕೆಲಸಕ್ಕೆ ಪ್ರಜ್ವಲ್ ರೇವಣ್ಣನನ್ನು ನಿಯೋಜಿಸಿಲ್ಲ.
ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು. ಖೈದಿಗಳ ಅರ್ಹತೆ, ಆಸಕ್ತಿಗೆ ಅನುಗುಣವಾಗಿ ಕೆಲಸ ಹಂಚಿಕೆ ಮಾಡಲಾಗುತ್ತೆ. ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಮಾಡುತ್ತೇನೆ, ಜೊತೆಗೆ ಜೈಲಿನ ಅಡ್ಮಿನಿಸ್ಟ್ರೇಟೀವ್ ಕೆಲಸ ಕೂಡ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದರು. ಆದರೇ, ಅಂತಿಮವಾಗಿ ಜೈಲು ಅಧಿಕಾರಿಗಳು ಲೈಬ್ರರಿ ಕ್ಲರ್ಕ್ ಕೆಲಸವನ್ನು ಪ್ರಜ್ವಲ್ ರೇವಣ್ಣಗೆ ನೀಡಿದ್ದಾರೆ.
ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಶ್ನಿಸಿ, ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ನಡೆಸಿದ್ದಾರೆ.
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…
ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…
ಟೆಹ್ರಾನ್ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…