ರಾಜ್ಯ

ಡಿಸಿಎಂ ಡಿಕೆಶಿಯಿಂದ ಆಪರೇಷನ್‌ ಆರೋಪ: ಮಾಜಿ ಸಂಸದ ಶ್ರೀರಾಮುಲು ಹೇಳಿದ್ದಿಷ್ಟು!

ಬಳ್ಳಾರಿ: ಕ್ರಿಮಿನಲ್‌ ಬ್ಯಾಗ್ರೌಂಡ್‌ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದರು.

ಸತೀಶ್‌ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್‌ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್‌ ಸಿಡಿಸಿದ ಬೆನ್ನಲ್ಲೇ ಬಳ್ಳಾರಿಯ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಜನಾರ್ಧನ ರೆಡ್ಡಿ ಆರೋಪಗಳಿಗೆ ಕೌಂಟರ್‌ ಮೇಲೆ ಕೌಂಟರ್‌ ಕೊಟ್ಟಿದ್ದಾರೆ.

ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಮಟ್ಟ ಹಾಕೋದಕ್ಕೆ ನಾನ್ಯಾರು? ಕಾಂಗ್ರೆಸ್‌ನಲ್ಲೂ ವಾಲ್ಮೀಕಿ ಸಮುದಾಯದ ನಾಯಕರಿದ್ದಾರೆ. ನಾನು ಸೋತಿದ್ದರೂ ನನ್ನ ಪಾರ್ಟಿಯಲ್ಲಿ ಪ್ರಬಲವಾಗಿದ್ದೇನೆ. ಸತೀಶ್‌ ಅವರನ್ನು ತೊಂದರೆ ಕೊಡೋದಕ್ಕೆ ಡಿಕೆಶಿ ನನ್ನ ಬಳಕೆ ಮಾಡಿಕೊಳ್ತಾರೆ ಅನ್ನೋದೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಯಾವುದೇ ಕಳಂಕ ಇಲ್ಲದೇ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ಎರಡು ಬಾರಿ ಸೋತಿರುವ ನೋವಿನಲ್ಲಿರುವ ನನಗೆ ಗಾಯದ ಮೇಲೆ ಬರೆ ಎಳೆಯಬೇಡಿ ಎಂದು ಕಿಡಿಕಾರಿದರು.

ಇನ್ನು ಬಿಜೆಪಿ ಪಕ್ಷ ಬಿಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಕಾರಣಕ್ಕೂ ಪಕ್ಷ ತೊರೆಯಲ್ಲ. ಪ್ರಧಾನಿ ಹಾಗೂ ವರಿಷ್ಠರನ್ನು ಭೇಟಿ ಮಾಡ್ತೀನಿ ಎಂದು ಹೇಳಿದೆ. ಇದೆಲ್ಲವನ್ನು ಕೇಂದ್ರ ನಾಯಕರಿಗೆ ಹೇಳುತ್ತೇನೆ. ಸುಳ್ಳಿನ ಮುಂದೆ ಸತ್ಯ ಸೋಲುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೋಕ್ಸೋ ಕೇಸ್‌| ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್‌ ರಿಲೀಫ್‌: ‌ಸೆಷನ್ಸ್‌ ಕೋರ್ಟ್‌ ಸಮನ್ಸ್‌ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ಕೋರ್ಟ್‌ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ…

21 mins ago

ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ವಿಚಾರ: ಮೈಸೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ

ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ…

34 mins ago

ರಾಜ್ಯ ಸರ್ಕಾರದಿಂದ ವಿಮಾ ಮೊತ್ತ ಏರಿಕೆ ಮಾಡಲು ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್‌ ಕಾರ್ಡ್‌ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…

49 mins ago

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್:‌ ತಪ್ಪೊಪ್ಪಿಕೊಂಡ ನಟಿ ರನ್ಯಾ ರಾವ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್‌ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…

59 mins ago

ಚಂಡೀಗಢ: ಅಪರಿಚಿತ ವ್ಯಕ್ತಿಗಳಿಂದ ಶಿವಸೇನಾ ನಾಯಕನ ಹತ್ಯೆ

ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…

1 hour ago

ಅಪ್ಪು ಸಿನಿಮಾ ರಿ-ರಿಲೀಸ್‌: ಅಭಿಮಾನಿಗಳೊಂದಿಗೆ ತನ್ನದೇ ಚಿತ್ರ ವೀಕ್ಷಿಸಿದ ರಕ್ಷಿತಾ

ಬೆಂಗಳೂರು: ದಿವಂಗತ ನಟ ಪುನೀತ್‌ ರಾಜ್‌ ಕುಮಾರ್‌ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್‌…

1 hour ago