ರಾಜ್ಯ

ಮುಡಾ ಮಾಜಿ ಆಯುಕ್ತ ದಿನೇಶ್‌ 9 ದಿನ ಇ.ಡಿ ವಶಕ್ಕೆ

ಬೆಂಗಳೂರು : ಕಾನೂನು ಬಾಹಿರವಾಗಿ ಹಣ ವರ್ಗಾವಣೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮೂಡಾ)ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ನ್ಯಾಯಾಲಯ 9 ದಿನಗಳ ಕಾಲ ಜಾರಿ ನಿರ್ದೇಶನಾಲಯ (ಇ.ಡಿ) ವಶಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಂಗಳವಾರ ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ದಿನೇಶ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ನಂತರ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರಪಡಿಸಿ ಒಂದು ದಿನದ ಮಟ್ಟಿಗೆ ಮಾತ್ರ ವಶಕ್ಕೆ ಪಡೆಯಲಾಗಿತ್ತು.

ಬುಧವಾರ ಬೆಂಗಳೂರಿನ ವಿಶೇಷ ಜನ ಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ದಿನೇಶ್ ಕುಮಾರ್ ಅವರನ್ನು ಹಾಜರುಪಡಿಸಿ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಇಡಿ ಪರ ವಕೀಲರು ಮನವಿ ಮಾಡಿ ಕೊಂಡರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದಿನೇಶ್ ಕುಮಾರ್ ಪರ ವಕೀಲರು ,ಒಂದು ವರ್ಷದಿಂದ ವಿಚಾರಣೆ ನಡೆಸದ ಇಡಿ ಅಧಿಕಾರಿಗಳು ಈಗ ಏಕೈಕ ತಮ್ಮ ವಶಕ್ಕೆ ಕೇಳುತ್ತಿದ್ದಾರೆ .ಅವರನ್ನು ಯಾವ ಕಾರಣಕ್ಕೆ ಬಂಧಿಸಲಾಗಿದೆ? ಪ್ರಕರಣ ಸಂಬಂಧಪಟ್ಟಂತೆ ಬ್ಯಾಂಕ್ ಖಾತೆಗಳು, ದಾಖಲೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ನೀಡಲಾಗಿದೆ. ಪುನಃ ತಮ್ಮ ವಶಕ್ಕೆ ನೀಡಿ ಎಂದು ಕೇಳುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ತಮ್ಮ ಕಕ್ಷಿಧಾರರು ಅಸ್ತಮಾ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ ಹೀಗಾಗಿ ಇಡಿ ವಶಕ್ಕೆ ನೀಡಬಾರದೆಂದು ವಕೀಲರಿಗೆ ಮನವಿ ಮಾಡಿದರು. ಅಂತಿಮವಾಗಿ ಎರಡು ಕಡೆ ವಾದ- ಪ್ರತಿವಾದ ಪಾಲಿಸಿದ ನ್ಯಾಯಾಧೀಶರು ದಿನೇಶ್ ಕುಮಾರ್ ಅವರನ್ನು 9 ದಿನಗಳ ಕಾಲ ಈಡಿ ವಶಕ್ಕೆ ನೀಡಿ ಆದೇಶ ನೀಡಿದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

6 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

6 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

7 hours ago