ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ 91ನೇ ಹುಟ್ಟುಹಬ್ಬದ ದಿನದಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮದ ಬಗ್ಗೆ ನಮಗೆ ತಕರಾರಿಲ್ಲ. ಅವರು ಹೊರಗಡೆ ಹೋಗಿದ್ದಾರೆ. ಆದರೆ, ರೇವಣ್ಣ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಜನರಿಗೆ ಸತ್ಯ ಗೊತ್ತಿದೆ. ರೇವಣ್ಣ ಪ್ರಕರಣ ಸದ್ಯ ಕೋರ್ಟಿನಲ್ಲಿ ನಡೆಯುತ್ತಿದ್ದು, ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಈ ಘಟನೆ ವಿಚಾರವಾಗಿ ಎಚ್ಡಿ ಕುಮಾರಸ್ವಾಮಿ ಅವರು ಎಲ್ಲವನ್ನು ಮಾತನಾಡಿದ್ದಾರೆ. ಪ್ರಕರಣ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರ ಕೈವಾಡವಿದೆ. ನಾನು ಯಾರ ಹೆಸರನ್ನು ಹೇಳಲು ಬಯಸುವುದಿಲ್ಲ. ಅನ್ಯಾಯವಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ವಿಶ್ಲೇಷನೆ ನೀಡುವುದಿಲ್ಲ ಎಂದು ಮೌನ ಮುರಿದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಕೀಲ ದೇವರಾಜೇಗೌಡ ನೂರು ಕೋಟಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಾನು ಮಾತನಾಡುವುದಿಲ್ಲ. ದೇವರಾಜೇಗೌಡ ಹೇಳಿರುವುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ. ಯಾವುದೇ ವಿಚಾರ ಬಂದರು ಎಲ್ಲದಕ್ಕೂ ಹೋರಾಟ ಮಾಡುವ ಛಲವಿದೆ. ಈ ಎಲ್ಲದಕ್ಕೂ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ನಿಮ್ಮನ್ನೆಲ್ಲಾ ಭೇಟಿಯಾಗುತ್ತೇನೆ. ಅಲ್ಲಿಯವರೆಗೆ ಯಾರನ್ನು ಭೇಟಿಯಾಗುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…