ರಾಜ್ಯ

ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ

ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದ ಹೆಸರಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಳ್ಳುತ್ತಿದೆ ಎಂದರೆ ದೇಶದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ. ಅಧಿವೇಶನದಲ್ಲಿ ‌ನಾನು ಅಮಿತ್ ಶಾ ಭಾಷಣ ಕೇಳಿದ್ದೇನೆ. ಅವರ ಭಾಷಣ ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರತಿಪಕ್ಷವಾಗಿ ಕಾಂಗ್ರೆಸ್ ತಪ್ಪು ಮಾಡುತ್ತಿದೆ ಎಂದು ಆರೋಪಿಸಿದರು.

ಅಟಲ್ ಜೀ ಅವರು ವಿರೋಧ ಪಕ್ಷದಲ್ಲಿದ್ದಾಗ ನಾನು ಅವರ ಭಾಷಣ ಕಾರಿನಲ್ಲಿ ಹೋಗುವಾಗ ಕೇಳುತ್ತಿದ್ದೆ. ಅವರ ಭಾಷಣ ಕೇಳುತ್ತಾ ನಾನು ವಿರೋಧ ಪಕ್ಷದ ನಾಯಕನಾದಾಗ ಹೇಗೆ ಮಾತನಾಡಬೇಕು ಎಂದು ತಿಳಿದುಕೊಳ್ಳುತ್ತಿದ್ದೆ. ಅವರು ವಿರೋಧ ಪಕ್ಷದ ನಾಯಕರಾಗಿ ಬಹಳ ಗೌರವಯುತವಾಗಿ ನಡೆದುಕೊಳ್ಳುತ್ತಿದ್ದರು. ಅವರು ಎಲ್ಲರಿಗೂ ಮಾದರಿಯಾಗಿದ್ದರು ಎಂದು ದೇವೇಗೌಡರು ಆ ಸಂದರ್ಭವನ್ನು ನೆನಪು ಮಾಡಿಕೊಂಡರು.

ನಾನು ಕನಸು ಮನಸ್ಸಿನಲ್ಲಿಯೂ ಪ್ರಧಾನಿ ಆಗುತ್ತೇನೆ ಎಂದು ಆಲೋಚನೆ ಮಾಡಿರಲಿಲ್ಲ. ಅವರು ಬರೀ 13 ದಿನ ಅಧಿಕಾರದಲ್ಲಿದ್ದರು. ಕಾಕತಾಳೀಯ ಎಂದರೆ, ಅವರ ನಂತರ 13 ಪಕ್ಷಗಳು ಸೇರಿ ಸಂಯುಕ್ತ ರಂಗ ರಚನೆ ಮಾಡಿ ನನ್ನನ್ನು ಪ್ರಧಾನಿ ಮಾಡಿದರು. ಆಗ ಏನೆಲ್ಲಾ ನಡೆಯಿತು ಎಂದು ನಾನು ಹೇಳಲು ಹೋಗಲ್ಲ. ನಾನು ಬರೀ 320 ದಿನ ಪ್ರಧಾನಿ ಆಗಿದ್ದೆ ಅಷ್ಟೇ ಎಂದು ದೇವೇಗೌಡರು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

3 mins ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

36 mins ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

5 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

5 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

5 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

5 hours ago