ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25 ರಂದು ಹೆಚ್.ಡಿ ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ. ಸದ್ಯ ಚೆನ್ನಮ್ಮ ಅವರು ಇಹಲೋಕ ತ್ಯಜಿಸಿದ್ದು, ಪತಿ ಹೆಚ್.ಡಿ ದೇವೇಗೌಡ, ಪುತ್ರ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಹಾಗೂ ಮಗಳು ಹೆಚ್.ಡಿ. ಅನುಸೂಯ ಅವರನ್ನ ಅಗಲಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ಪತಿ ಹೆಚ್.ಡಿ ದೇವೇಗೌಡ, ಪುತ್ರ ಹೆಚ್.ಡಿ ಕುಮಾರಸ್ವಾಮಿ ಸೇರಿ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮಣಿಪಾಲ ಆಸ್ಪತ್ರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕೂಡ ಭೆಟಿ ನೀಡಿದ್ದಾರೆ. ಸಂಸದ ಡಾ. ಮಂಜುನಾಥ್ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ.
ಆಸ್ಪತ್ರೆ ಪ್ರಕ್ರಿಯೆಗಳು ಮುಗಿದ ಬಳಿಕ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಪಾರ್ಥೀವ ಶರೀರ ತೆಗೆದುಕೊಂಡು ಹೋಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…