ರಾಜ್ಯ

ಮಾಜಿ ಪ್ರಧಾನಿ ಎಚ್‌ಡಿಡಿ, ಬೊಮ್ಮಾಯಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ

ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮೊದಲಿಗೆ ಆರ್‌ಟಿ ನಗರದದಲ್ಲಿರುವ ಬೊಮ್ಮಾಯಿ ಅವರ ಮನೆಗೆ ತೆರಳಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 15 ರಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತೇನೆ. ಚುನಾವಣಾ ಕಾರ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ನಿರತರಾಗಿದ್ದಾರೆ. ಹಾಗಾಗಿ ನ.23ರಂದು ದೆಹಲಿಗೆ ತೆರಳಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಚರ್ಚೆ ಮಾಡುತ್ತೇನೆಂದು ತಿಳಿಸಿದರು.

ಇದರ ಬೆನ್ನಲ್ಲೇ ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ದೀಪಾವಳಿ ಶುಭಾಷಯ ಕೋರಿ, ಆಶೀರ್ವಾದ ಪಡೆದಿದ್ದೇನೆ ಎಂದರು. ದೊಡ್ಡ ರಾಷ್ಟ್ರೀಯ ಪಕ್ಷವೊಂದು ಚಿಕ್ಕ ವಯಸ್ಸಿಗೆ ದೊಡ್ಡ ಜವಾಬ್ದಾರಿ ಕೊಟ್ಟಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ರೀತಿಯಲ್ಲಿ ಪಕ್ಷ ಸಂಘಟನೆಗೆ ಶ್ರಮ ವಹಿಸಿ ಯಶಸ್ವಿಯಾಗುವಂತೆ ಹರಸಿದ್ದಾರೆ. ಅವರ ಭೇಟಿಯಿಂದ ನನಗೆ ಸಂತೋಷವಾಗಿದೆ. ಅವರ ಚಿಂತನೆಗಳು ನಮಗೆ ಶಕ್ತಿ ನೀಡುತ್ತವೆ. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಹಾಗೂ ಯಡಿಯೂರಪ್ಪ ಅವರು ನೆನಪಾಗುತ್ತಾರೆ ಎಂದು ಸ್ಮರಿಸಿದರು.

ಪಕ್ಷ ಹಿತದೃಷ್ಠಿಯಿಂದ ಜೆಡಿಎಸ್‌ ವರಿಷ್ಠರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಸಲಹೆಗಳನ್ನು ಸ್ವೀಕರಿಸುತ್ತೇವೆ ಎಂದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

3 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

31 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago