ರಾಜ್ಯ

ಮಾಜಿ ಪ್ರಧಾನಿ ಎಚ್‌ಡಿಡಿ, ಬೊಮ್ಮಾಯಿ ಆಶೀರ್ವಾದ ಪಡೆದ ಬಿವೈ ವಿಜಯೇಂದ್ರ

ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್‌.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಮೊದಲಿಗೆ ಆರ್‌ಟಿ ನಗರದದಲ್ಲಿರುವ ಬೊಮ್ಮಾಯಿ ಅವರ ಮನೆಗೆ ತೆರಳಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 15 ರಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತೇನೆ. ಚುನಾವಣಾ ಕಾರ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ನಿರತರಾಗಿದ್ದಾರೆ. ಹಾಗಾಗಿ ನ.23ರಂದು ದೆಹಲಿಗೆ ತೆರಳಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಚರ್ಚೆ ಮಾಡುತ್ತೇನೆಂದು ತಿಳಿಸಿದರು.

ಇದರ ಬೆನ್ನಲ್ಲೇ ಜೆಡಿಎಸ್‌ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ದೀಪಾವಳಿ ಶುಭಾಷಯ ಕೋರಿ, ಆಶೀರ್ವಾದ ಪಡೆದಿದ್ದೇನೆ ಎಂದರು. ದೊಡ್ಡ ರಾಷ್ಟ್ರೀಯ ಪಕ್ಷವೊಂದು ಚಿಕ್ಕ ವಯಸ್ಸಿಗೆ ದೊಡ್ಡ ಜವಾಬ್ದಾರಿ ಕೊಟ್ಟಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರ ರೀತಿಯಲ್ಲಿ ಪಕ್ಷ ಸಂಘಟನೆಗೆ ಶ್ರಮ ವಹಿಸಿ ಯಶಸ್ವಿಯಾಗುವಂತೆ ಹರಸಿದ್ದಾರೆ. ಅವರ ಭೇಟಿಯಿಂದ ನನಗೆ ಸಂತೋಷವಾಗಿದೆ. ಅವರ ಚಿಂತನೆಗಳು ನಮಗೆ ಶಕ್ತಿ ನೀಡುತ್ತವೆ. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಹಾಗೂ ಯಡಿಯೂರಪ್ಪ ಅವರು ನೆನಪಾಗುತ್ತಾರೆ ಎಂದು ಸ್ಮರಿಸಿದರು.

ಪಕ್ಷ ಹಿತದೃಷ್ಠಿಯಿಂದ ಜೆಡಿಎಸ್‌ ವರಿಷ್ಠರು ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಸಲಹೆಗಳನ್ನು ಸ್ವೀಕರಿಸುತ್ತೇವೆ ಎಂದರು.

andolanait

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

1 hour ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

16 hours ago