ಬೆಂಗಳೂರು : ಬಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು, ಮಾಜಿ ಪ್ರಧಾನಿ ಎಚ್.ಡಿ ದೇವೆಗೌಡರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಮೊದಲಿಗೆ ಆರ್ಟಿ ನಗರದದಲ್ಲಿರುವ ಬೊಮ್ಮಾಯಿ ಅವರ ಮನೆಗೆ ತೆರಳಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 15 ರಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತೇನೆ. ಚುನಾವಣಾ ಕಾರ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ನಿರತರಾಗಿದ್ದಾರೆ. ಹಾಗಾಗಿ ನ.23ರಂದು ದೆಹಲಿಗೆ ತೆರಳಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತು ಚರ್ಚೆ ಮಾಡುತ್ತೇನೆಂದು ತಿಳಿಸಿದರು.
ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ದೀಪಾವಳಿ ಶುಭಾಷಯ ಕೋರಿ, ಆಶೀರ್ವಾದ ಪಡೆದಿದ್ದೇನೆ ಎಂದರು. ದೊಡ್ಡ ರಾಷ್ಟ್ರೀಯ ಪಕ್ಷವೊಂದು ಚಿಕ್ಕ ವಯಸ್ಸಿಗೆ ದೊಡ್ಡ ಜವಾಬ್ದಾರಿ ಕೊಟ್ಟಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ರೀತಿಯಲ್ಲಿ ಪಕ್ಷ ಸಂಘಟನೆಗೆ ಶ್ರಮ ವಹಿಸಿ ಯಶಸ್ವಿಯಾಗುವಂತೆ ಹರಸಿದ್ದಾರೆ. ಅವರ ಭೇಟಿಯಿಂದ ನನಗೆ ಸಂತೋಷವಾಗಿದೆ. ಅವರ ಚಿಂತನೆಗಳು ನಮಗೆ ಶಕ್ತಿ ನೀಡುತ್ತವೆ. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಹಾಗೂ ಯಡಿಯೂರಪ್ಪ ಅವರು ನೆನಪಾಗುತ್ತಾರೆ ಎಂದು ಸ್ಮರಿಸಿದರು.
ಪಕ್ಷ ಹಿತದೃಷ್ಠಿಯಿಂದ ಜೆಡಿಎಸ್ ವರಿಷ್ಠರು ಹಾಗೂ ಎಚ್ಡಿ ಕುಮಾರಸ್ವಾಮಿ ಅವರ ಸಲಹೆಗಳನ್ನು ಸ್ವೀಕರಿಸುತ್ತೇವೆ ಎಂದರು.
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…