ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ಗೆ ನಡೆಯಲಿದ್ದು, ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ವಿರೋಧಿಸಿ, ಬ್ಲಾಸ್ಟ್ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಕೋರಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಕೆಆರ್ಎಸ್ ಡ್ಯಾಂನ ಬೃಂದಾವನ ಗೇಟ್ ಬಳಿ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೃಂದಾವನಕ್ಕೆ ನುಗ್ಗಲು ಯತ್ನಿಸಿದರು. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ರೈತ ಸಂಘಟನೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಟ್ರಯಲ್ ಬ್ಲಾಸ್ಟ್ ಗೆ ಆಗಮಿಸಿರುವ ತಜ್ಞರನ್ನು ವಾಪಸ್ ಕಳುಹಿಸಬೇಕು. ಈ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡಿ ಕೆಆರ್ಎಸ್ ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುತ್ತಾರೆ. ಇದರಿಂದ ಕೆಆರ್ಎಸ್ ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ.
ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…
ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…