ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಬೃಂದಾವನ ಗೇಟ್ ಬಳಿ ರೈತಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ ಗೆ ನಡೆಯಲಿದ್ದು, ರಾಜ್ಯ ಸರ್ಕಾರ ಅನುಮತಿ ನೀಡಿದ್ದನ್ನು ವಿರೋಧಿಸಿ, ಬ್ಲಾಸ್ಟ್ ಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಕೋರಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಕೆಆರ್ಎಸ್ ಡ್ಯಾಂನ ಬೃಂದಾವನ ಗೇಟ್ ಬಳಿ ರೈತ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೃಂದಾವನಕ್ಕೆ ನುಗ್ಗಲು ಯತ್ನಿಸಿದರು. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ರೈತ ಸಂಘಟನೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಟ್ರಯಲ್ ಬ್ಲಾಸ್ಟ್ ಗೆ ಆಗಮಿಸಿರುವ ತಜ್ಞರನ್ನು ವಾಪಸ್ ಕಳುಹಿಸಬೇಕು. ಈ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡಿ ಕೆಆರ್ಎಸ್ ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುತ್ತಾರೆ. ಇದರಿಂದ ಕೆಆರ್ಎಸ್ ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…