siddaramaiah
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಸಮಾರಂಭ ಹಾಗೂ ಛತ್ರಪತಿ ಶಿವಾಜಿ ಹಾಗೂ ಬಸವಣ್ಣ ಅವರ ಮೂರ್ತಿಗೆ ತಲಾ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸೂಚಿಸಿರುವುದು ಚುನಾವಣಾ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ. ಇದು ಗಿಮಿಕ್ ಹೇಗಾಗುತ್ತದೆ ಎಂದರು. ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದರು.
ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ ಅವರು, ಹೆಚ್.ವೈ.ಮೇಟಿ ಕುಟುಂಬದವರನ್ನೇ ಆಯ್ಕೆ ಮಾಡಲಾಗುವುದೇ ಎಂಬ ಮಾಧ್ಯಮಗಳ ಉತ್ತರ ನೀಡಿ ಅವರೂ ಒಬ್ಬ ಆಕಾಂಕ್ಷಿ ಎಂದರು.
ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು ಎಂದು ಹೇಳಿದ ಅವರು, ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ ಎಂದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…