siddaramaiah
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು ಬಾಗಲಕೋಟೆಯ ನವನಗರ ಹೆಲಿಪ್ಯಾಡ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉಪಚುನಾವಣೆ ಸಂದರ್ಭದಲ್ಲಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ಸಮಾರಂಭ ಹಾಗೂ ಛತ್ರಪತಿ ಶಿವಾಜಿ ಹಾಗೂ ಬಸವಣ್ಣ ಅವರ ಮೂರ್ತಿಗೆ ತಲಾ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸೂಚಿಸಿರುವುದು ಚುನಾವಣಾ ಗಿಮಿಕ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ. ಇದು ಗಿಮಿಕ್ ಹೇಗಾಗುತ್ತದೆ ಎಂದರು. ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದರು.
ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ ಅವರು, ಹೆಚ್.ವೈ.ಮೇಟಿ ಕುಟುಂಬದವರನ್ನೇ ಆಯ್ಕೆ ಮಾಡಲಾಗುವುದೇ ಎಂಬ ಮಾಧ್ಯಮಗಳ ಉತ್ತರ ನೀಡಿ ಅವರೂ ಒಬ್ಬ ಆಕಾಂಕ್ಷಿ ಎಂದರು.
ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು ಎಂದು ಹೇಳಿದ ಅವರು, ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ ಎಂದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…