ಬೆಂಗಳೂರು: ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು ಡಿಪ್ಲೊಮಾ ಕಾಲೇಜುಗಳಿಗೆ ಮರು ಅನುಮತಿ ನೀಡಲಾಗಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಮಂಡ್ಯ ವಿ.ಸಿ ಫಾರ್ಮ್, ಶಿವಮೊಗ್ಗ ಕೃಷಿ ವಿ.ವಿ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರ ಕಾಲೇಜು, ಧಾರವಾಡ ಕೃಷಿ ವಿ.ವಿ ವ್ಯಾಪ್ತಿಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕಾಲೇಜು ಮತ್ತು ರಾಯಚೂರು ಕೃಷಿ ವಿ.ವಿ ವ್ಯಾಪ್ತಿಯ ಬೀದರ್ ಕೃಷಿ ಡಿಪ್ಲೊಮಾ ಕಾಲೇಜುಗಳು ಪುನಾರಂಭಕ್ಕೆ ರಾಜ್ಯದ ಸರ್ಕಾರದ ಅನುಮೋದನೆ ನೀಡಿದೆ.
ಈ ಡಿಪ್ಲೊಮಾ ಕೋರ್ಸ್ ಗಳನ್ನು ಹಿಂದಿನ ಸರ್ಕಾರದ ಅವಧಿಯಲ್ಲಿ ತಡೆಹಿಡಿಯಲಾಗಿತ್ತು. ಆದರೆ ಕೃಷಿ ಡಿಪ್ಲೊಮಾ ಕೋರ್ಸ್ ಗಳ ಪುನಾರಂಭಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಬೇಡಿಕೆ ಸಲ್ಲಿಸಿದ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ವಿಶೇಷ ಕಾಳಜಿವಹಿಸಿ ಈ ನಾಲ್ಕು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಾರಂಭಕ್ಕೆ ಅವಕಾಶ ಒದಗಿಸಿಕೊಟ್ಟಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…