Four arrested for brutally assaulting a young man
ಬೆಂಗಳೂರು: ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಗ್ಯಾಂಗ್ವೊಂದು ಯುವಕನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಹಿನ್ನೆಲೆ: ಕಾಲೇಜಿಗೆ ಹೋಗುತ್ತಿದ್ದಾಗ ಕುಶಾಲ್ ಹಾಗೂ ಯುವತಿಯ ನಡುವೆ ಪ್ರೀತಿ ಚಿಗುರಿತ್ತು. ಸುಮಾರು 2 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಯು ಕುಶಾಲ್ಗೆ ಗುಡ್ಬೈ ಹೇಳಿ ಬೇರೆ ಯುವಕನನ್ನು ಪ್ರೀತಿಸುತ್ತಿದ್ದಳು. ಇದರಿಂದ ರೊಚ್ಚಿಗೆದ್ದ ಕುಶಾಲ್ ಯುವತಿಗೆ ಅಶ್ಲೀಲ ಸಂದೇಶ ರವಾನಿಸಿದ್ದ. ನಂತರ ಈ ವಿಷಯವನ್ನು ಯುವತಿ ತನ್ನ ಗೆಳೆಯರಿಗೆ ತಿಳಿಸಿದ್ದಾಳೆ. ನಂತರ ಯುವತಿ ತನ್ನ ಗೆಳೆಯರ ಜೊತೆ ಕುಶಾಲ್ನನ್ನು ಕಾರಿನಲ್ಲಿ ಅಪಹರಿಸಿಕೊಂಡು ಬಂದು, ನಿರ್ಜನ ಪ್ರದೇಶದಲ್ಲಿ ಬಟ್ಟೆ ಬಿಚ್ಚಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…