ರಾಜ್ಯ

ಅಕ್ರಮ ರಕ್ತಚಂದನ ಸಾಗಾಟ: ನಾಲ್ವರ ಬಂಧನ

ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಸಹಚರರೊಂದಿಗೆ ಸೇರಿಕೊಂಡು ಆಂಧ್ರಪ್ರದೇಶದ ಕಡಪ ಜಿಲ್ಲೆಯ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ರಕ್ತ ಚಂದನವನ್ನು ಖರೀದಿಸಿ ಹೆಚ್ಚಿನ ಬೆಲೆಗೆ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದುದ್ದಾಗಿ ಹೇಳಿದ್ದಾನೆ.

ಇದನ್ನು ಓದಿ: ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ

ಆರೋಪಿ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿನ ಚಿನ್ನಕಂದಿಲಿ ಗ್ರಾಮದಲ್ಲಿ 316 ಕೆಜಿ ರಕ್ತ ಚಂದನ ಹಾಗೂ ಕಾರು, ಕುಲುಮೆಪಾಳ್ಯದಲ್ಲಿ 496 ಕೆಜಿ ರಕ್ತ ಚಂದನ, ಕಾರು ಸೇರಿದಂತೆ ಒಟ್ಟು 1 ಕೋಟಿ ಮೌಲ್ಯದ 1,143 ಕೆಜಿ ರಕ್ತ ಚಂದನವನ್ನು ಇನ್‌ಸ್ಪೆಕ್ಟರ್‌ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ತಂಡ ವಶಪಡಿಸಿಕೊಂಡಿದ್ದು, ಇತರೆ ಸಹಚರರ ಪತ್ತೆಕಾರ್ಯ ಮುಂದುವರೆದಿದೆ.

ಬುಲೆರೋ ವಾಹನದಲ್ಲಿ ರಕ್ತ ಚಂದನ ಸಂಗ್ರಹಿಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಆರ್‌ಟಿನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಕೆಹೆಚ್‌ಎಂ ಬ್ಲಾಕ್‌ನ ಈರುಳ್ಳಿ ಮೈದಾನದಲ್ಲಿ ಇಬ್ಬರನ್ನುಬಂಧಿಸಿ 75.4 ಲಕ್ಷ ಮೌಲ್ಯದ 754 ಕೆಜಿ 200 ಗ್ರಾಂ ರಕ್ತ ಚಂದನದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶ ರಾಜ್ಯದವರಾಗಿದ್ದು, ಯಾವುದೇ ಉದ್ಯೋಗವಿಲ್ಲದೇ ಜೀವನ ನಿರ್ವಹಣೆ ಮಾಡಲು ಹಣ ಸಂಪಾದನೆಗಾಗಿ ಇವರಿಬ್ಬರೂ ಸೇರಿಕೊಂಡು ಆಂಧ್ರದ ಮದನಪಲ್ಲಿಯ ಸುಂಡೆಪಲ್ಲಿ ಭಾಗದಿಂದ ರಕ್ತ ಚಂದನ ಮರದ ತುಂಡುಗಳನ್ನು ಕಳವು ಮಾಡಿಕೊಂಡು ಮಾರಾಟ ಮಾಡುವ ಸಲುವಾಗಿ ನಗರಕ್ಕೆ ಬಂದಿರುವುದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

1 hour ago

ಓದುಗರ ಪತ್ರ: ನಾಯಿ ಕಡಿತಕ್ಕೆ ಲಸಿಕೆ ಸರಬರಾಜು ಮಾಡಿ

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…

1 hour ago

ಓದುಗರ ಪತ್ರ: ಕಸಾಪ ಭ್ರಷ್ಟರ ಕೈಗೆ ಸಿಗದಂತಾಗಲಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸದಾಶಯ!

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…

1 hour ago

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ  ಎಚ್.ಡಿ.ಕೋಟೆ: ತಾಲ್ಲೂಕಿನ…

1 hour ago

ಕೈಕೊಟ್ಟ ಮಳೆ; ಬಾಡಿದ ಸೂರ್ಯಕಾಂತಿ ಬೆಳೆ

ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು…

2 hours ago