ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಸಹಚರರೊಂದಿಗೆ ಸೇರಿಕೊಂಡು ಆಂಧ್ರಪ್ರದೇಶದ ಕಡಪ ಜಿಲ್ಲೆಯ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ರಕ್ತ ಚಂದನವನ್ನು ಖರೀದಿಸಿ ಹೆಚ್ಚಿನ ಬೆಲೆಗೆ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದುದ್ದಾಗಿ ಹೇಳಿದ್ದಾನೆ.
ಇದನ್ನು ಓದಿ: ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ
ಆರೋಪಿ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿನ ಚಿನ್ನಕಂದಿಲಿ ಗ್ರಾಮದಲ್ಲಿ 316 ಕೆಜಿ ರಕ್ತ ಚಂದನ ಹಾಗೂ ಕಾರು, ಕುಲುಮೆಪಾಳ್ಯದಲ್ಲಿ 496 ಕೆಜಿ ರಕ್ತ ಚಂದನ, ಕಾರು ಸೇರಿದಂತೆ ಒಟ್ಟು 1 ಕೋಟಿ ಮೌಲ್ಯದ 1,143 ಕೆಜಿ ರಕ್ತ ಚಂದನವನ್ನು ಇನ್ಸ್ಪೆಕ್ಟರ್ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ತಂಡ ವಶಪಡಿಸಿಕೊಂಡಿದ್ದು, ಇತರೆ ಸಹಚರರ ಪತ್ತೆಕಾರ್ಯ ಮುಂದುವರೆದಿದೆ.
ಬುಲೆರೋ ವಾಹನದಲ್ಲಿ ರಕ್ತ ಚಂದನ ಸಂಗ್ರಹಿಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಆರ್ಟಿನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಕೆಹೆಚ್ಎಂ ಬ್ಲಾಕ್ನ ಈರುಳ್ಳಿ ಮೈದಾನದಲ್ಲಿ ಇಬ್ಬರನ್ನುಬಂಧಿಸಿ 75.4 ಲಕ್ಷ ಮೌಲ್ಯದ 754 ಕೆಜಿ 200 ಗ್ರಾಂ ರಕ್ತ ಚಂದನದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಆಂಧ್ರಪ್ರದೇಶ ರಾಜ್ಯದವರಾಗಿದ್ದು, ಯಾವುದೇ ಉದ್ಯೋಗವಿಲ್ಲದೇ ಜೀವನ ನಿರ್ವಹಣೆ ಮಾಡಲು ಹಣ ಸಂಪಾದನೆಗಾಗಿ ಇವರಿಬ್ಬರೂ ಸೇರಿಕೊಂಡು ಆಂಧ್ರದ ಮದನಪಲ್ಲಿಯ ಸುಂಡೆಪಲ್ಲಿ ಭಾಗದಿಂದ ರಕ್ತ ಚಂದನ ಮರದ ತುಂಡುಗಳನ್ನು ಕಳವು ಮಾಡಿಕೊಂಡು ಮಾರಾಟ ಮಾಡುವ ಸಲುವಾಗಿ ನಗರಕ್ಕೆ ಬಂದಿರುವುದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…