ರಾಜ್ಯ

ಅಕ್ರಮ ರಕ್ತಚಂದನ ಸಾಗಾಟ: ನಾಲ್ವರ ಬಂಧನ

ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ ನಿಂತಿರುವ ಬಗ್ಗೆ ಪೊಲೀಸರಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿ ಒಬ್ಬನನ್ನು ಬಂಧಿಸಿ, ಕಾರಿನ ಸಮೇತ 95 ಕೆಜಿ ರಕ್ತ ಚಂದನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಸಹಚರರೊಂದಿಗೆ ಸೇರಿಕೊಂಡು ಆಂಧ್ರಪ್ರದೇಶದ ಕಡಪ ಜಿಲ್ಲೆಯ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ರಕ್ತ ಚಂದನವನ್ನು ಖರೀದಿಸಿ ಹೆಚ್ಚಿನ ಬೆಲೆಗೆ ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದುದ್ದಾಗಿ ಹೇಳಿದ್ದಾನೆ.

ಇದನ್ನು ಓದಿ: ನಾಳೆ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲಾ ಪ್ರವಾಸ

ಆರೋಪಿ ನೀಡಿದ ಮಾಹಿತಿ ಮೇರೆಗೆ ತಮಿಳುನಾಡಿನ ಚಿನ್ನಕಂದಿಲಿ ಗ್ರಾಮದಲ್ಲಿ 316 ಕೆಜಿ ರಕ್ತ ಚಂದನ ಹಾಗೂ ಕಾರು, ಕುಲುಮೆಪಾಳ್ಯದಲ್ಲಿ 496 ಕೆಜಿ ರಕ್ತ ಚಂದನ, ಕಾರು ಸೇರಿದಂತೆ ಒಟ್ಟು 1 ಕೋಟಿ ಮೌಲ್ಯದ 1,143 ಕೆಜಿ ರಕ್ತ ಚಂದನವನ್ನು ಇನ್‌ಸ್ಪೆಕ್ಟರ್‌ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ತಂಡ ವಶಪಡಿಸಿಕೊಂಡಿದ್ದು, ಇತರೆ ಸಹಚರರ ಪತ್ತೆಕಾರ್ಯ ಮುಂದುವರೆದಿದೆ.

ಬುಲೆರೋ ವಾಹನದಲ್ಲಿ ರಕ್ತ ಚಂದನ ಸಂಗ್ರಹಿಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆಂಬ ಮಾಹಿತಿ ಮೇರೆಗೆ ಆರ್‌ಟಿನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಕೆಹೆಚ್‌ಎಂ ಬ್ಲಾಕ್‌ನ ಈರುಳ್ಳಿ ಮೈದಾನದಲ್ಲಿ ಇಬ್ಬರನ್ನುಬಂಧಿಸಿ 75.4 ಲಕ್ಷ ಮೌಲ್ಯದ 754 ಕೆಜಿ 200 ಗ್ರಾಂ ರಕ್ತ ಚಂದನದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶ ರಾಜ್ಯದವರಾಗಿದ್ದು, ಯಾವುದೇ ಉದ್ಯೋಗವಿಲ್ಲದೇ ಜೀವನ ನಿರ್ವಹಣೆ ಮಾಡಲು ಹಣ ಸಂಪಾದನೆಗಾಗಿ ಇವರಿಬ್ಬರೂ ಸೇರಿಕೊಂಡು ಆಂಧ್ರದ ಮದನಪಲ್ಲಿಯ ಸುಂಡೆಪಲ್ಲಿ ಭಾಗದಿಂದ ರಕ್ತ ಚಂದನ ಮರದ ತುಂಡುಗಳನ್ನು ಕಳವು ಮಾಡಿಕೊಂಡು ಮಾರಾಟ ಮಾಡುವ ಸಲುವಾಗಿ ನಗರಕ್ಕೆ ಬಂದಿರುವುದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

19 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

19 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

19 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago