ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಿದ ಅರಣ್ಯ ಸಚಿವರು, ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸರಕು ಸಾಗಣೆ ವಿಭಾಗಕ್ಕೆ ತೆರಳಿ ಬನ್ನೇರುಘಟ್ಟ ಮೃಗಾಲಯಕ್ಕೆ ಆಗಮಿಸಿರುವ ಈ ವಿದೇಶಿ ಅತಿಥಿಗಳನ್ನು ಬರಮಾಡಿಕೊಂಡರು.
ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿರುವ ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ ಅವುಗಳಿಗೆ ಯಾವುದೇ ತೊಂದರೆ ಆಗದಂತೆ, ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಬೇಕು, ವನ್ಯಜೀವಿಗಳನ್ನು ಕ್ವಾರಂಟೈನಲ್ಲಿಡಬೇಕು, 30ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು, ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ ರಾಜ್ಯದ ಕಾಡಿನಲ್ಲಿ ಇವು ನಾಮಾವಶೇಷ ಆಗಿವೆ. ಹೀಗಾಗಿ ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕು. ಈ ನಿಟ್ಟಿನಲ್ಲಿ ಅವುಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…