Mysore
27
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ಮಂಡ್ಯ: ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್‌ ಬ್ಲಾಸ್ಟ್‌

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್​ಎಸ್​​ನ ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಟ್ರಯಲ್‌ ಬ್ಲಾಸ್ಟ್‌ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!