ರಾಜ್ಯ

ಮಂಡ್ಯ: ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್‌ ಬ್ಲಾಸ್ಟ್‌

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್​ಎಸ್​​ನ ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಟ್ರಯಲ್‌ ಬ್ಲಾಸ್ಟ್‌ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.

andolana

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

2 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

2 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

3 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

8 hours ago