ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ.
ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್ಎಸ್ನ ರಾಯಲ್ ಆರ್ಕಿಡ್ ಹೋಟೆಲ್ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.
ಈ ಟ್ರಯಲ್ ಬ್ಲಾಸ್ಟ್ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.
ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.
ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್ಎಸ್ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್ಎಸ್ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ ನಡೆಸಲಿದೆ.
ಟ್ರಯಲ್ ಬ್ಲಾಸ್ಟ್ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…