ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ.
ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್ಎಸ್ನ ರಾಯಲ್ ಆರ್ಕಿಡ್ ಹೋಟೆಲ್ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.
ಈ ಟ್ರಯಲ್ ಬ್ಲಾಸ್ಟ್ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.
ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.
ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್ಎಸ್ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್ಎಸ್ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ ನಡೆಸಲಿದೆ.
ಟ್ರಯಲ್ ಬ್ಲಾಸ್ಟ್ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…