ರಾಜ್ಯ

ಮಂಡ್ಯ: ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್‌ ಬ್ಲಾಸ್ಟ್‌

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್​ಎಸ್​​ನ ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಟ್ರಯಲ್‌ ಬ್ಲಾಸ್ಟ್‌ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.

andolana

Recent Posts

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ…

8 hours ago

ಮಡಿಕೇರಿ| ಹುಲಿ ದಾಳಿಗೆ ಜಾನುವಾರು ಬಲಿ

ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…

8 hours ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ…

9 hours ago

ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌

ನವದೆಹಲಿ: ಕಾಂಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಜೂನ್.‌6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…

9 hours ago

3000 ರೂಗೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಈಗ ಸಚಿವೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…

9 hours ago

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ.ಖಾದರ್‌

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…

9 hours ago