ರಾಜ್ಯ

ಮಂಡ್ಯ: ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್‌ ಬ್ಲಾಸ್ಟ್‌

ಮಂಡ್ಯ: ಪಾಂಡವಪುರದ ಬೇಬಿ ಬೆಟ್ಟದಲ್ಲಿ ಟ್ರಯಲ್‌ ಬ್ಲಾಸ್ಟ್‌ ಸಂಬಂಧ ಇಂದು (ಮಾ.05) ಬೆಳಿಗ್ಗೆ ಹೊರ ರಾಜ್ಯದ ತಜ್ಞರೋಂದಿಗೆ ಕಾವೇರಿ ನೀರಾವರಿ ನಿಯಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಅಥವಾ ಗುರುವಾರ ಆಯ್ದ ಸ್ಥಳಗಳಲ್ಲಿ ಟ್ರಯಲ್​ ಬ್ಲಾಸ್ಟ್​ ನಡೆಸಲಿದ್ದಾರೆ.

ಜನರ ವಿರೋಧದ ನಡುವೆಯೂ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ಇಂದಿನಿಂದ ನಾಲ್ಕು ದಿನ ಟ್ರಯಲ್ ಬ್ಲಾಸ್ಟ್​​ಗೆ ಅನುಮತಿ ಸಿಗಲಿದೆಯಾ ಕಾದು ನೋಡಬೇಕಿದೆ. ಸೋಮವಾರ ರಾತ್ರಿಯೇ ಕೆಆರ್​ಎಸ್​​ನ ರಾಯಲ್ ಆರ್ಕಿಡ್ ಹೋಟೆಲ್​ನಲ್ಲಿ ತಜ್ಞರ ತಂಡ ವಾಸ್ತವ್ಯ ಹೂಡಿಸಿದೆ.

ಈ ಟ್ರಯಲ್ ಬ್ಲಾಸ್ಟ್​​ ಅನ್ನು ವಿರೋಧಿಸಿ, ಟ್ರಯಲ್ ಬ್ಲಾಸ್ಟ್​ಗೆ ಆಗಮಿಸಿರುವ ತಜ್ಞರು ವಾಪಾಸ್ ತೆರಳುವಂತೆ ರೈತರು ಕೆಆರ್​ಎಸ್​ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ.

ಜೊತೆಗೆ ರೈತ ಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಬಿಜೆಪಿ ಕೂಡ ಪ್ರತ್ಯೇಕವಾಗಿ ಧರಣಿ ನಡೆಸಲು ನಿರ್ಧರಿಸಿದೆ.

ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹಿಂದಿನ ಬಿಜೆಪಿ ಸರ್ಕಾರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಿಸಿತ್ತು. ಬೇಬಿ ಬೆಟ್ಟ ಸೇರಿದಂತೆ ಕೆಆರ್​ಎಸ್​ ಡ್ಯಾಂನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲಾಗಿತ್ತು. ಇದಾದ ಬಳಿಕ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯಬೇಕೋ ಬೇಡವೋ, ಬೇಬಿ ಬೆಟ್ಟದ ಗಣಿಗಾರಿಕೆಯಿಂಧ ಕೆಆರ್​ಎಸ್​ ಅಣೆಕಟ್ಟೆಗೆ ಹಾನಿಯಾಗುತ್ತಾ ಎಂದು ತಿಳಿಯಲು ಮಾಡುವ ಉದ್ದೇಶದಿಂದ ಹೈಕೋರ್ಟ್​ ಟ್ರಯಲ್​ ಬ್ಲಾಸ್ಟ್​ ನಡೆಸಲು ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ 4 ದಿನ ಟ್ರಯಲ್​​ ಬ್ಲಾಸ್ಟ್​ ನಡೆಸಲಿದೆ.

ಟ್ರಯಲ್‌ ಬ್ಲಾಸ್ಟ್‌ ನಂತರ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸಬೇಕೋ ಇಲ್ಲವೋ ಎಂಬ ಬಗೆಗಿನ ಮುಂದಿನ ನಡೆ ತಿಳಿಯಲಿದೆ.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

20 mins ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

44 mins ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

1 hour ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

2 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

2 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

6 hours ago