ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೃದಯ ವಿದ್ರಾವಕ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲೇನಹಳ್ಳಿ ಗ್ರಾಮದ ಆಶಾ (50) ಹಾಗೂ ಮಗಳು ವರ್ಷಿತಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಶಾ ಅವರ ಪುತ್ರ ಮೋಹನ್ಗೌಡ (27) ಮತ್ತು ಮೊಮ್ಮಗ ಮಯಾನ್ಗೌಡ (11) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಒಂದು ಕಡೆ ಐಷಾರಾಮಿ ಜೀವನ, ಮತ್ತೊಂದು ಕಡೆ ಅತಿಯಾದ ಸಾಲ, ಇನ್ನೊಂದು ಕಡೆ ಚೀಟಿ ವ್ಯವಹಾರ. 5 ಲಕ್ಷ, 10 ಲಕ್ಷ, 50 ಲಕ್ಷದ ಚೀಟಿ ಜೊತೆಗೆ ಯುಗಾದಿಗೆ ಮಟನ್ ಚೀಟಿ, ದೀಪಾವಳಿಗೆ ಪಟಾಕಿ ಚೀಟಿ ಹೀಗೆ ಕೋಟಿ ಕೋಟಿ ವ್ಯವಹಾರ ಮಾಡುತ್ತಿದ್ದವರು ಇಂದು ಮನೆಯಲ್ಲೇ ಶವವಾಗಿರುವುದು ದುರ್ದೈವ.
ಮನೆ ಮಗ ಮೋಹನ್ಗೌಡ ಕೋಟ್ಯಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲಗಾರರು ಹಣ ವಾಪಸ್ ಕೇಳುತ್ತಿದ್ದರು. ಹಣ ಹಿಂದಿರುಗಿಸಲು ಸಾಧ್ಯವಾಗದೆ ಸಾಲಗಾರರ ಉಪಟಳದಿಂದ ಈ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿದೆ.
ಅದರಂತೆ ನಿನ್ನೆ ರಾತ್ರಿ ಈ ಕುಟುಂಬ ನಾವು ಸಾಲಗಾರರ ಕಾಟ ತಾಳಲಾರದೆ ಆತಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋ ಮಾಡಿದೆ. ನಂತರ ಮನೆ ಬಾಗಿಲನ್ನು ಲಾಕ್ ಮಾಡಿಕೊಂಡಿದ್ದಾರೆ.
ಮೋಹನ್ಗೌಡ ತನ್ನ ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.
ವಿಡಿಯೋ ಹರಿಬಿಟ್ಟ ಕೆಲವೇ ನಿಮಿಷಗಳಲ್ಲಿ ಸಂಬಂಧಿಕರು ಗಮನಿಸಿ ಗಾಬರಿಯಾಗಿ ತಕ್ಷಣ ಇವರ ಮನೆ ಬಳಿಗೆ ಬಂದು ಕಾಲಿಂಗ್ ಬೆಲ್ ಒತ್ತಿ ಬಾಗಿಲು ಬಡಿದಿದ್ದಾರೆ.
ಮನೆಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮನೆ ಹಿಂಬಾಗಿಲ ಮೂಲಕ ಸಂಬಂಧಿಕರು ಒಳಗೆ ಹೋಗಿ ನೋಡಿದಾಗ ರಕ್ತದ ಮಡುವಿನಲ್ಲಿ ನಾಲ್ಕು ಮಂದಿ ಬಿದ್ದಿರುವುದು ಕಂಡು ಬಂದಿದೆ. ಅಷ್ಟೊತ್ತಿಗಾಗಲೇ ತಾಯಿ-ಮಗಳ ಪ್ರಾಣಪಕ್ಷಿ ಹಾರಿಹೋಗಿತ್ತು.
ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ ಸಂಬಂಧಿಕರು, ತೀವ್ರ ರಕ್ತಸ್ರಾವವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೋಹನ್ಗೌಡ ಹಾಗೂ ಮಾಯಾಂಕ್ನನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…